ರಾಜ್ಯದಲ್ಲಿ ಜೋರಾಯ್ತು ಸಿಎಂ ಸ್ಥಾನಕ್ಕಾಗಿ ಬೇಡಿಕೆ: ವೀರಶೈವ ಲಿಂಗಾಯಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು: ಶ್ರೀಶೈಲ ಪೀಠದ ಜಗದ್ಗುರುಗಳ ಆಗ್ರಹ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಹೆಚ್ಚಾಗುತ್ತಿದೆ. ನಿನ್ನೆ ಒಕ್ಕಲಿಗ ಮಹಾಸಂಸ್ಥನ ಮಠದ ಚಂದ್ರಶೇಖರ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಲಿಂಗಾಯಿತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಶ್ರೀಶೈಲ ಪೀಠದ ಜಗದ್ಗುರು ಶಿವಾಚಾರ್ಯ ಸ್ವಾಮೀಜಿ, ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾದರೆ ವೀರಶೈವ ಲಿಂಗಾಯಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಎಂದು ಒತ್ತಾಯಿಸಿದ್ದಾರೆ.

ಲಿಂಗಾಯಿತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬರಲು ವೀರಶೈವ ಲಿಂಗಾಯಿತರ ಪಾತ್ರ ಪ್ರಮುಖವಾಗಿದೆ. ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read