BREAKING : ಬೆಂಗಳೂರು ಮಹಾಮಳೆಗೆ ಬಲಿಯಾದ ಮಹಿಳೆ ಕುಟುಂಬಕ್ಕೆ ‘BBMP’ ಯಿಂದ 5 ಲಕ್ಷ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಬೆಂಗಳೂರಲ್ಲಿ ಸುರಿದ ಮಹಾಮಳೆಗೆ ಮಹಿಳೆ ಬಲಿಯಾಗಿದ್ದು, ಬಿಬಿಎಂಪಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

ಮಳೆಹಾನಿ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೋಡೆ ಕುಸಿದು ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಸುರಿದ ಮಹಾಮಳೆ ಅವಾಂತರಕ್ಕೆ ಮೊದಲ ಬಲಿಯಾಗಿದೆ. ವರುಣಾರ್ಭಟಕ್ಕೆ ಗೋಡೆ ಕುಸಿದು ಬಿದ್ದು ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಈ ದುರಂತ ಸಂಭವಿಸಿದೆ. ಶಶಿಕಲಾ (35) ಮೃತ ಮಹಿಳೆ. ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಶಶಿಕಲಾ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read