ಸಾಹಿತಿ ನಾ. ಡಿಸೋಜ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸಾಗರದ ನಾ. ಡಿಸೋಜ ಅವರು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

2014ರಲ್ಲಿ ಮಡಿಕೇರಿಯಲ್ಲಿ ನಡೆದ 80ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕ್ಯಾತ ಕಾದಂಬರಿಕಾರ, ಕಥೆಗಾರ ನಾ. ಡಿಸೋಜ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ 7:30ಕ್ಕೆ ನಿಧನರಾಗಿದ್ದಾರೆ.

ನಾಡಿನ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ.ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ. ನಾ.ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read