ಓವಲ್‌ ಟೆಸ್ಟ್ ನಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಲಂಡನ್ ಓವಲ್ ನಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಅದ್ಭುತವಾದ ಆರು ರನ್‌ಗಳ ಜಯ ಸಾಧಿಸಿದೆ.

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತ ಓವಲ್‌ ನಲ್ಲಿ ಅದ್ಭುತ ಟೆಸ್ಟ್ ಗೆಲುವು ಸಾಧಿಸಿದ ಟೀಂ ಇಂಡಿಯಾ ತಂಡಕ್ಕೆ ಅಭಿನಂದನೆಗಳು!

ನಮ್ಮ ಯುವ ತಂಡವು 5 ನೇ ಟೆಸ್ಟ್ ಗೆದ್ದು ಇಂಗ್ಲೆಂಡ್‌ನಲ್ಲಿ ಸರಣಿಯನ್ನು ಸಮಬಲಗೊಳಿಸಲು ಧೈರ್ಯ, ಕೌಶಲ್ಯ ಮತ್ತು ದೃಢಸಂಕಲ್ಪವನ್ನು ತೋರಿಸಿದೆ – ಇದು ನಿಜಕ್ಕೂ ಸ್ಮರಣೀಯ ಸಾಧನೆ.

ಕರ್ನಾಟಕದ ಕೆ.ಎಲ್. ರಾಹುಲ್ ಮತ್ತು ಕರುಣ್, ಪ್ರಸಿದ್ಧ್ ಕೃಷ್ಣ ಅವರ ಮಹತ್ವದ ಕೊಡುಗೆಗಳ ಬಗ್ಗೆ ಹೆಮ್ಮೆಯಿದೆ. ನೀವು ಪ್ರತಿಯೊಬ್ಬ ಕನ್ನಡಿಗನನ್ನು ಹೆಮ್ಮೆಪಡುವಂತೆ ಮಾಡಿದ್ದೀರಿ! ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read