ಉಪ ಚುನಾವಣೆ ಗೆಲುವಿನ ಬೆನ್ನಲ್ಲೇ ಸಿಎಂ ರಣತಂತ್ರ: ದೇವೇಗೌಡರ ತವರಲ್ಲಿ ಶಕ್ತಿ ಪ್ರದರ್ಶನಕ್ಕೆ ‘ಸ್ವಾಭಿಮಾನಿ ಸಮಾವೇಶ’

ಬೆಂಗಳೂರು: ವಿರೋಧ ಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದಾರೆ. ಡಿಸೆಂಬರ್ 5 ರಂದು ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಯಲಿದೆ.

ಆರು ಜಿಲ್ಲೆಗಳ ಬೆಂಬಲಿಗರ ಸಮ್ಮುಖದಲ್ಲಿ ಶಕ್ತಿ ಪ್ರದರ್ಶನಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಸಲು ನಿನ್ನೆ ಹಾಸನದಲ್ಲಿ ಯತೀಂದ್ರ ಹಾಗೂ ನಾಲ್ವರು ಸಚಿವರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಸಮಾವೇಶದ ತಯಾರಿಯ ಕುರಿತಾಗಿ ಮುಖ್ಯಮಂತ್ರಿ ಆಪ್ತ ಸಚಿವರು ಚರ್ಚೆ ನಡೆಸಿದ್ದಾರೆ. ಡಾ.ಹೆಚ್.ಸಿ. ಮಹಾದೇವಪ್ಪ, ಕೆ.ಎನ್. ರಾಜಣ್ಣ, ಬೋಸರಾಜು ಮತ್ತು ಕೆ. ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಹಾಸನ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳನ್ನು ಒಗ್ಗೂಡಿಸಿ ಸಚಿವರು ಸಭೆ ನಡೆಸಿದ್ದಾರೆ. ದೇವೇಗೌಡರ ತವರಿನಲ್ಲೇ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಉಪಚುನಾವಣೆ ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ಪಾಳೆಯಕ್ಕೆ ಚೈತನ್ಯ ತುಂಬಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಪಕ್ಷ ಹಾಗೂ ಸರ್ಕಾರ ಹೊರತುಪಡಿಸಿ ಬೆಂಬಲಿಗರ ಸಮಾವೇಶಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read