ಜಾಲತಾಣದಲ್ಲಿ ತಿಥಿ ಕಾರ್ಡ್ ರಚಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವಹೇಳನ: ದೂರು

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಿಥಿ ಕಾರ್ಡ್ ರಚಿಸಿ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು ನೀಡಲಾಗಿದೆ.

ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್ಬುಕ್ ಖಾತೆಯಲ್ಲಿ ಪ್ರಜ್ವಲ್ ಎಂಬಾತ ಸಿಎಂ ತಿಥಿ ಕಾರ್ಡ್ ರಚಿಸಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸಿದ್ದರಾಮಯ್ಯನವರ ತಿಥಿ ಕಾರ್ಡ್ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ರಚಿಸಿ ಜಾಲತಾಣಗಳಲ್ಲಿ ಶೇರ್ ಮಾಡಲಾಗಿದೆ. ಮೂಡಿಗೆರೆಯ ಪ್ರಜ್ವಲ್ ಈ ರೀತಿ ಪೋಸ್ಟ್ ಹಾಕಿದ್ದು, ಸಿದ್ದರಾಮಯ್ಯ ಅಭಿಮಾನಿ ಬಳಗ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಜ್ವಲ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read