ಸಿದ್ಧರಾಮಯ್ಯಗೆ ತಪ್ಪದ ಭೂಕಂಟಕ: ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಸಲಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರಿಂದ ದೂರು ಸಲ್ಲಿಕೆಯಾಗಿದ್ದು, ಸಿಎಂ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ, ಬಿಡಿಎ ಆಯುಕ್ತ, ಬಿಡಿಎ ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿದೆ. ಅರ್ಕಾವತಿ ಬಡಾವಣೆಯಲ್ಲಿ ಸೈಟು ಹಂಚಿಕೆಯಾಗಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ, ರಾಜಶೇಖರ ಎಂಬುವರು ದೂರು ನೀಡಿದ್ದಾರೆ.

ಅರ್ಕಾವತಿ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನದಾರರಿಗೆ ತೊಂದರೆ ನೀಡಲಾಗಿದೆ. ನಿವೇಶನದಾರರಿಗೆ ನೀಡಿದ್ದ ನಿವೇಶನಗಳನ್ನು ವಾಪಸ್ ಪಡೆಯಲಾಗಿದೆ. ಭೂಮಿ ನೀಡಿದ್ದ ರೈತರಿಗೂ ಭೂಮಿ ವಾಪಸ್ ನೀಡಿಲ್ಲ ಎಂದು ಆರೋಪಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read