ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ, ಸಮಾಲೋಚನೆ ನಡೆಸಿದರು.
ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ಕೆ.ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಶಾಸಕರಾದ ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್ ಸೇಠ್, ಡಾ.ಯತೀಂದ್ರ ಎಸ್, ಡಾ.ಡಿ.ತಿಮ್ಮಯ್ಯ, ಅನಿಲ್ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಅಯೂಬ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.
TAGGED:ಮೈಸೂರು ದಸರಾ 2025