‘ಗೃಹಲಕ್ಷ್ಮೀ’ ಹಣ ತಲುಪಿಸಲು ಡಿಸಿ, ಜಿ.ಪಂ ಸಿಇಒ ಪರಿಶೀಲನೆ ಮಾಡಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

ಹಾಸನ : ಗೃಹಲಕ್ಷ್ಮೀ ಹಣ ತಲುಪಿಸಲು ಡಿಸಿ, ಜಿ.ಪಂ ಸಿಇಒ ಪರಿಶೀಲನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜಿಲ್ಲೆಯಲ್ಲಿ 44 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿಲ್ಲ, ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಪರಿಶೀಲನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸರ್ಕಾರ ಹಣ ಕೊಡಲು ತಯಾರಿರುವಾಗ ನೀವು ಅದನ್ನು ಗಮನಿಸಬೇಕು. ಗೃಹಜ್ಯೋತಿ ಯೋಜನೆಗೂ 63 ಸಾವಿರ ಗ್ರಾಹಕರ ನೋಂದಣಿ ಆಗಬೇಕು. ಎಲ್ಲವನ್ನೂ ಗಮನಿಸಿ ಅವರು ಅರ್ಹರಿದ್ದರೆ ಮಾಡಿ ಇಲ್ಲವಾದರೆ ಕೈಬಿಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದ್ದು, ಈಗಾಗಲೇ ಮೊದಲ ಕಂತಿನ ಹಣ ಜಮಾ ಆಗಿದೆ. ಹಲವರಿಗೆ 2ನೇ ಕಂತಿನ ಹಣ ಕೂಡ ಜಮಾ ಆಗಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read