BREAKING : ದೆಹಲಿಯ ರಾಷ್ಟ್ರಪತಿ ಭವನದಲ್ಲಿ CM ಸಿದ್ದರಾಮಯ್ಯ- ಬಾಲಿವುಡ್ ನಟ ಅಮೀರ್ ಖಾನ್ ಮುಖಾಮುಖಿ ಭೇಟಿ

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಬಾಲಿವುಡ್ ನಟ ಅಮೀರ್ ಖಾನ್ ರನ್ನು ಭೇಟಿಯಾದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್ನ ಸಂವೇದನಾಶೀಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು.

ಸಿನೆಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು ಆಪ್ತವಾಗಿಸಿದೆ. ಅವರ ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹಾರೈಸಿ, ಆರೋಗ್ಯದ ಕಾಳಜಿ ವಹಿಸುವಂತೆ ಸಲಹೆ ನೀಡಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read