BREAKING : ಶಾಸಕ ‘ಹೆಚ್.ವೈ ಮೇಟಿ’ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ CM ಸಿದ್ದರಾಮಯ್ಯ.!

ಬೆಂಗಳೂರು : ಅನಾರೋಗ್ಯದಿಂದ ಇಂದು ನಿಧನರಾದ ಕಾಂಗ್ರೆಸ್ ಶಾಸಕ ಹೆಚ್.ವೈ.ಮೇಟಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಇಂದು ಅಂತಿಮ ದರ್ಶನ ಪಡೆದರು.

ಮಾಜಿ ಸಚಿವರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಮತ್ತಿತರರಿದ್ದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಾಳೆ ಮೇಟಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಲಿಂಗಾಯ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ಶಾಸಕ ಹೆಚ್ ವೈ ಮೇಟಿ ನಿಧನದಿಂದ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದ್ದು, ಕಣ್ಣೀರಿಡುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read