BREAKING : ನಾವಿಬ್ಬರೂ ಒಂದೇ : DCM ಡಿ.ಕೆ ಶಿವಕುಮಾರ್ ಕೈ ಎತ್ತಿ ಒಗ್ಗಟ್ಟು ಪ್ರದರ್ಶಿಸಿದ CM ಸಿದ್ದರಾಮಯ್ಯ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಎತ್ತಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ‘ ನಾವಿಬ್ಬರು (ಡಿಸಿಎಂ ಡಿಕೆ –ಸಿದ್ದರಾಮಯ್ಯ) ಚೆನ್ನಾಗಿಯೇ ಇದ್ದೇವೆ. ಯಾರು ಹೇಳಿದ್ರೂ ನಾವು ಕೇಳಲ್ಲ. ಈ ಸರ್ಕಾರ ಕಲ್ಲು ಬಂಡೆ ಹಾಗೆ ಸುಭದ್ರವಾಗಿರಲಿದೆ ಎಂದು ಹೇಳಿದ್ದಾರೆ. ಸುರ್ಜೆವಾಲಾ ಬೆಂಗಳೂರಿಗೆ ಬರ್ತಾರೆ, ಬಂದು ಎಲ್ಲರ ಅಹವಾಲು ಕೇಳುತ್ತಾರೆ ಎಂದು ಹೇಳಿದರು.

ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಾನು ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಚನ್ನಾಗಿಯೇ ಇದ್ದೇವೆ. ಮುಂದೆಯೂ ಚೆನ್ನಾಗಿಯೇ ಇರುತ್ತೇವೆ ಎಂದು ಹೇಳುತ್ತಾ ಡಿ.ಕೆ.ಶಿವಕುಮ್ನಾರ್ ಅವರ ಕೈ ಎತ್ತಿದರು. ಇಬ್ಬರೂ ಸಂತೋಷದಿಂದಲೇ ಮುಗುಳ್ನಗುತ್ತ ಒಗ್ಗಟ್ಟು ಪ್ರದರ್ಶಿಸಿದ ಪ್ರಸಂಗ ನಡೆಯಿತು. ನಾವೆಲ್ಲರೂ ಬಂಡೆಯಂತೆ ಒಗ್ಗಟ್ಟಿನಲ್ಲಿದೇವೆ ಎಂದರು. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರುತ್ತದೆ. ನಾನು, ಡಿ.ಕೆ.ಶಿವಕುಮಾರ್ ಚನ್ನಾಗಿಯೇ ಇದ್ದೇವೆ. ಒಗ್ಗಟ್ಟಿನಲ್ಲಿಯೇ ಇದ್ದೇವೆ. ಯಾರು ತಂದು ಹಾಕಿದರೂ ನಾವು ಯಾರ ಮಾತು ಕೇಳಲ್ಲ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read