ಇಂದಿನಿಂದ 3 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು : ಆಗಸ್ಟ್ 27 ರ ಇಂದಿನಿಂದ 3 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಸಭೆ, ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ಆಗಸ್ಟ್ 28ರಂದು ಮೈಸೂರಿನಲ್ಲಿ ಕೆಡಿಪಿ ಸಭೆ ನಡೆಸಲಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ನಂತರ ಆ.30ರಂದು ಗೃಹಲಕ್ಷ್ಮೀ ಯೋಜನಾ ಚಾಲನಾ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರಿನಲ್ಲಿ ಎರಡು ಮಹತ್ವದ ಕಾರ್ಯಕ್ರಮಗಳ ಆಯೋಜನೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಚಾಲನೆ ನೀಡಲಿದೆ. ರಾಜ್ಯ ಸರ್ಕಾರಕ್ಕೆ 100 ದಿನ ತುಂಬಿದ ಹಿನ್ನೆಲೆ ಶತದಿನೋತ್ಸವ ಕಾರ್ಯಕ್ರಮ ಕೂಡ ಮೈಸೂರಿನಲ್ಲಿಯೇ ನಡೆಸಲಾಗುತ್ತಿದೆ. ಕೆಲದಿನಗಳ ಹಿಂದಷ್ಟೇ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಚಾಲನೆ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿತ್ತು. ಈ ಮೂಲಕ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶಿಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read