Anna Bhagya Scheme : ‘ಅನ್ನಭಾಗ್ಯ’ ವಿಳಂಬ ಆಯಿತು, ಅದಕ್ಕೆ ಹಣ ಕೊಡಲು ಹೇಳಿದ್ದೇನೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ‘ಅನ್ನಭಾಗ್ಯ’ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಹಣ ನೀಡುವ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ವಿಳಂಬ ಆಯಿತು, ಅದಕ್ಕೆ ಹಣ ಕೊಡಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡಲಿಲ್ಲ, ಅದಕ್ಕೆ ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

‘ಅನ್ನಭಾಗ್ಯ’ ಯೋಜನೆಯಡಿ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಬದಲಿಗೆ ತಲಾ 170 ರೂಪಾಯಿ ನಗದು ನೀಡಲು ತೀರ್ಮಾನಿಸಲಾಗಿದ್ದು, ಈ ಪ್ರಕ್ರಿಯೆ ಜುಲೈ 1ರಿಂದ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಈ ಯೋಜನೆ ಜುಲೈ 10ರ ನಂತರ ಆರಂಭವಾಗಲಿದೆ ಎಂದು ತಿಳಿದುಬಂದಿದೆ.ಶನಿವಾರದಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯದ ಹಣ ಪಾವತಿಯನ್ನು ಜುಲೈ 10ರ ನಂತರ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ. ಜುಲೈ ತಿಂಗಳ ಮೊತ್ತವನ್ನು ಇದೇ ತಿಂಗಳಿನಲ್ಲಿಯೇ ಪಡಿತರ ಕಾರ್ಡ್ ದಾರರ ಬ್ಯಾಂಕ್ ಖಾತೆಗಳಿಗೆ ಡಿ ಬಿ ಟಿ ಮೂಲಕ ಪಾವತಿಸಲು ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read