BIG NEWS : ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ : ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ನೂತನ ಪಕ್ಷ ಸ್ಥಾಪಿಸಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿರುವ ಜನಾರ್ಧನ ರೆಡ್ಡಿ ವಿರುದ್ಧ ಇದೀಗ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಜನಾರ್ಧನ ರೆಡ್ಡಿ ನಾಮಪತ್ರ ಸಲ್ಲಿಕೆಯಲ್ಲಿ ದೋಷವಿದೆ ಎಂದು ಚುನಾವಣಾ ಆಯೋಗಕ್ಕೆ ಅನಂತಪುರ ಗಣಿ ಉದ್ಯಮಿ ಟಪಾಲು ಶ್ಯಾಮ ಪ್ರಸಾದ್, ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಜೂನ್.26ರಂದು ರಾಜ್ಯ ಚುನಾವಣಾ ಆಯೋಗಕ್ಕೆ ಟಪಾಲು ಶ್ಯಾಮ್ ಪ್ರಸಾದ್ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಚುನಾವಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read