‘ಬಿಗ್ ಬಾಸ್’ ಸ್ಪರ್ಧಿ, ಸ್ಯಾಂಡಲ್ ವುಡ್ ನಟಿ ದೀಪಿಕಾ ದಾಸ್ ಗೆ ಬೆದರಿಕೆ: ದೂರು ದಾಖಲು

ಬೆಂಗಳೂರು: ‘ಬಿಗ್ ಬಾಸ್’ ಸ್ಪರ್ಧಿ, ನಟಿ ದೀಪಿಕಾ ದಾಸ್ ಮತ್ತು ಅವರ ಪತಿಗೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೀಪಿಕಾ ದಾಸ್ ಅವರ ತಾಯಿ ಪದ್ಮಲತಾ ಈ ಬಗ್ಗೆ ದೂರು ನೀಡಿದ್ದಾರೆ. ದೀಪಿಕಾ ದಾಸ್ ಇತ್ತೀಚೆಗೆ ದೀಪಕ್ ಕುಮಾರ್ ಎಂಬುವರೊಂದಿಗೆ ಮದುವೆಯಾಗಿದ್ದಾರೆ. ಯಶವಂತ್ ಎಂಬ ಯುವಕ ಅಳಿಯ ದೀಪಕ್ ಕುಮಾರ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾನೆ. ಹಣ ಕೊಡದಿದ್ದರೆ ನಿಮ್ಮ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾಗಿ ಪದ್ಮಲತಾ ಪೊಲೀಸರಿಗೆ ದೂರು ನೀಡಿದ್ದಾರೆ.

ದೀಪಕ್ ಕುಮಾರ್ ನೊಂದಿಗೆ ದೀಪಿಕಾ ದಾಸ್ ಗೆ ಏಕೆ ಮದುವೆ ಮಾಡಿದಿರಿ. ಆತ ಮೋಸಗಾರ, ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದು, ಜೈಲಿಗೆ ಹೋಗಿ ಬಂದಿದ್ದಾನೆ ಎಂದು ಯಶವಂತ್ ಹೇಳಿದ್ದಾನೆ. ದೀಪಿಕಾ ದಾಸ್ ಅವರಿಗೂ ಕರೆ ಮಾಡಿ ನನಗೆ ಹಣ ಕೊಡಿ, ಇಲ್ಲದಿದ್ದರೆ ನಿಮ್ಮ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಕಳೆದ ಏಳು ತಿಂಗಳಿಂದ ದೀಪಿಕಾ ದಾಸ್, ಪದ್ಮಲತಾ ಹಾಗೂ ದೀಪಕ್ ಕುಮಾರ್ ಗೆ ಸಂಬಂಧಿಸಿದ ಅನೇಕರಿಗೆ ಕರೆ ಮಾಡಿ ಯಶವಂತ್ ಈ ರೀತಿ ಬೆದರಿಕೆ ಹಾಕಿದ್ದಾರೆ. ಪದ್ಮಲತಾ ದೂರು ನೀಡಿದ್ದು, ಮಾದನಾಯಕನಹಳ್ಳಿ ಠಾಣೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read