BREAKING: ನಟಿ, ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಮಾಡಿ ಪರಾರಿಯಾಗಿದ್ದ ಪತಿ ಅರೆಸ್ಟ್

ಮೈಸೂರು: ನಟಿ ಹಾಗೂ ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ನಂದೀಶ್ ನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ.

ಬನ್ನೂರು ಠಾಣೆ ಇನ್ ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಂದೀಶ್ ನನ್ನು ಬಂಧಿಸಿದ ಪೊಲೀಸರು ಬನ್ನೂರಿಗೆ ಕರೆತಂದಿದ್ದಾರೆ.

ಮೇ 20ರಂದು ರಾತ್ರಿ ಸುತ್ತಿಗೆಯಿಂದ ಹೊಡೆದು ಆರೋಪಿ ಪತ್ನಿ ವಿದ್ಯಾರನ್ನು ಕೊಲೆ ಮಾಡಿದ್ದ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತುರಗನೂರು ಗ್ರಾಮದಲ್ಲಿ ಘಟನೆ ನಡೆದಿತ್ತು. ಪತ್ನಿ ಕೊಲೆ ಮಾಡಿ ಮಂಡ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read