BIG NEWS: ಕೇಸರಿ, ಕುಂಕುಮ, ದತ್ತಮಾಲೆ, ಅಯೋಧ್ಯೆ ಬಗ್ಗೆ ಶೃಂಗೇರಿ ಶಾಸಕ ರಾಜೇಗೌಡ ವಿವಾದಿತ ಹೇಳಿಕೆ

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರು ದತ್ತ ಪೀಠ, ಅಯೋಧ್ಯೆ ಹೋರಾಟ ಹಿಂದೂ ಪರ ಸಂಘಟನೆಗಳ ಬಗ್ಗೆ ಟೀಕಿಸಿದ್ದಾರೆ. ಅವರು ನಾಲಿಗೆ ಹರಿಬಿಟ್ಟಿರುವ ಆಡಿಯೋ ವೈರಲ್ ಆಗಿದೆ.

ದತ್ತ ಮಾಲೆ ಹಾಕಿಸಿ, ಕುಂಕುಮ ಹಾಕಿ ಕರೆದೊಯ್ಯುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿಕೊಟ್ಟರು ಎಂದು ರಾಜೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಯೋಧ್ಯ, ದತ್ತಪೀಠ ಹೋರಾಟದ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

ಕೇಸರಿ ಶಾಲು, ಕುಂಕುಮ, ದತ್ತಮಾಲೆ ಹಾಕಿದರೆ ಹೊಟ್ಟೆ ತುಂಬುವುದಿಲ್ಲ ಎಂದು ಶೃಂಗೇರಿ ಶಾಸಕ ರಾಜೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಶಾಸಕರ ಬಹಿರಂಗ ಕ್ಷಮೆಯಾಚನೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳಿಂದ ಜಿಲ್ಲಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read