ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ: ಕನ್ಹಯ್ಯಾ ಕುಮಾರ್, ಚನ್ನಿಗೆ ಟಿಕೆಟ್ ಘೋಷಣೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದ್ದು, ದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಇನ್ನೂ 10 ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ.

ಕಾಂಗ್ರೆಸ್ ಈಶಾನ್ಯ ದೆಹಲಿಯಿಂದ ಕನ್ಹಯ್ಯಾ ಕುಮಾರ್, ಜಲಂಧರ್‌ನಿಂದ ಚರಂಜಿತ್ ಸಿಂಗ್ ಚನ್ನಿ ಅವರನ್ನು ಕಣಕ್ಕಿಳಿಸಿದೆ.

ಚಾಂದಿನಿ ಚೌಕ್‌ನಿಂದ ಹಿರಿಯ ನಾಯಕ ಜೆ.ಪಿ. ಅಗರ್ವಾಲ್, ಈಶಾನ್ಯ ದೆಹಲಿಯಿಂದ ಜೆಎನ್‌ಯುಎಸ್‌ಯು ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಮತ್ತು ವಾಯುವ್ಯ ದೆಹಲಿಯಿಂದ ಉದಿತ್ ರಾಜ್ ಅವರನ್ನು ಕಣಕ್ಕಿಳಿಸಿದೆ.

ಕನ್ಹಯ್ಯಾ ಕುಮಾರ್ ಈಶಾನ್ಯ ದೆಹಲಿಯಿಂದ(ಬಿಜೆಪಿ ಈಶಾನ್ಯ ದೆಹಲಿ ಅಭ್ಯರ್ಥಿ ಮನೋಜ್ ತಿವಾರಿ ವಿರುದ್ಧ), ಜೆಪಿ ಅಗರ್ವಾಲ್ ಚಾಂದಿನಿ ಚೌಕದಿಂದ(ಬಿಜೆಪಿ ಅಭ್ಯರ್ಥಿ ಪ್ರವೀಣ್ ಖಂಡೇಲ್ವಾಲ್ ವಿರುದ್ಧ), ಉದಿತ್ ರಾಜ್ ವಾಯುವ್ಯ ದೆಹಲಿಯಿಂದ (ಯೋಗೇಂದ್ರ ಚಂದೋಲಿಯಾ ವಿರುದ್ಧ) ಸ್ಪರ್ಧಿಸಲಿದ್ದಾರೆ.

ಪಂಜಾಬ್‌ನಲ್ಲಿ ಅಮೃತಸರದಿಂದ ಗುರ್ಜೀತ್ ಸಿಂಗ್ ಔಜ್ಲಾ ಅವರು ಬಿಜೆಪಿ ಅಭ್ಯರ್ಥಿ ಮತ್ತು ಅಮೆರಿಕದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ವಿರುದ್ಧ ಸ್ಪರ್ಧಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಜಲಂಧರ್‌ನಿಂದ(ಎಸ್‌ಸಿಗೆ ಮೀಸಲು), ಪಟಿಯಾಲದಿಂದ ಮಾಜಿ ಎಎಪಿ ನಾಯಕ ಡಾ.ಧರಮ್‌ವೀರ್ ಗಾಂಧಿ ವಿರುದ್ಧ ಕಣಕ್ಕಿಳಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read