ಕಟ್ಟಡ ಕಾರ್ಮಿಕರ ಸಹಾಯಧನ ಹೆಚ್ಚಳ: ಮರಣ ಪರಿಹಾರ 8 ಲಕ್ಷ ರೂ. ಗೆ, ಅಂತ್ಯಕ್ರಿಯೆ ವೆಚ್ಚ 1.5 ಲಕ್ಷ ರೂ.ಗೆ ಏರಿಕೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳಿಗೆ ನೀಡುವ ಅಪಘಾತ ಮರಣ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚ ಸಹಾಯಧನವನ್ನು ಸರ್ಕಾರ ಹೆಚ್ಚಳ ಮಾಡಿದೆ.

ನೋಂದಾಯಿತ ಫಲಾನುಭವಿಗಳು ಕೆಲಸದ ಸ್ಥಳದಲ್ಲಿ ಅಪಘಾತದಿಂದ ಮರಣ ಹೊಂದಿದಲ್ಲಿ ನೀಡಲಾಗುತ್ತಿದ್ದ 5 ಲಕ್ಷ ರೂ. ಪರಿಹಾರವನ್ನು 8 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಮರಣ ಹೊಂದಿದಾಗ ನೀಡಲಾಗುತ್ತಿದ್ದ ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹ ರಾಶಿ ಸಹಾಯಧನ ಮೊತ್ತವನ್ನು 75,000 ರೂ.ನಿಂದ 1.50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ ಎಂದು ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಿ. ಭಾರತಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read