ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಆರ್ಭಟ ಹಿನ್ನೆಲೆಯಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ದಿನಾಂಕ 28.7.2025 ರ ಸೋಮವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.