ಗುತ್ತಿಗೆ ಪೌರಕಾರ್ಮಿಕರಿಗೆ ಸಿಹಿ ಸುದ್ದಿ: ಕಾಯಂ ನೇಮಕಾತಿ ಪತ್ರ ವಿತರಣೆ ಶೀಘ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಾರು 600ಕ್ಕೂ ಅಧಿಕ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಡಿಸೆಂಬರ್ ಒಳಗೆ ಅಂತಿಮ ಪಟ್ಟಿಯನ್ನು ಪ್ರಕಟಿಸಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಡಿ ವೃಂದದ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು ಎರಡು ಹಂತದಲ್ಲಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 3673, ಎರಡನೇ ಹಂತದಲ್ಲಿ 11307 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಮುಂದಿನ 15 ದಿನಗಳಲ್ಲಿ ಆಕ್ಷೇಪಣೆ ಪರಿಶೀಲನೆ ಕಾರ್ಯ ಪೂರ್ಣಗೊಳ್ಳಲಿದ್ದು, ಬಳಿಕ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸಿ ಗುತ್ತಿಗೆ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read