ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 25 ಲಕ್ಷ ರೂ. ಮೌಲ್ಯದ ಕುಕ್ಕರ್ ವಶಕ್ಕೆ

ಬೆಳಗಾವಿ ಜಿಲ್ಲೆಯಲ್ಲಿ 25 ಲಕ್ಷ ರೂಪಾಯಿ ಮೌಲ್ಯದ ಕುಕ್ಕರ್ ಗಳನ್ನು ಜಪ್ತಿ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ತಡೆಸಲೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಕುಕ್ಕರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

25 ಲಕ್ಷ ರೂಪಾಯಿ ಮೌಲ್ಯದ 1800 ಕುಕ್ಕರ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮದುರ್ಗ ಬಿಜೆಪಿ ಅಭ್ಯರ್ಥಿ ಚಿಕ್ಕ ರೇವಣ್ಣ ಅವರಿಗೆ ಸೇರಿದ ಕುಕ್ಕರ್ ಗಳು ಇವಾಗಿವೆ ಎಂದು ಹೇಳಲಾಗಿದೆ.

ಮತದಾನದ ಹಿಂದಿನ ದಿನ ಮತದಾರರಿಗೆ ಹಂಚಲು ಕುಕ್ಕರ್ ಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ, ಬೀರಪ್ಪ ಮತ್ತು ಚೆನ್ನಪ್ಪ ಅವರ ವಿರುದ್ಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read