ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 252 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 7359 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ 1031 ಸಕ್ರಿಯ ಪ್ರಕರಣಗಳಿದ್ದು, 441 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 3.42ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 172 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಹಾಸನ ಜಿಲ್ಲೆ 20, ಮೈಸೂರು 8, ವಿಜಯನಗರ ಜಿಲ್ಲೆ 7 ಹೊಸ ಕೇಸ್ ಪತ್ತೆಯಾಗಿವೆ. ರಾಯಚೂರು, ಬಳ್ಳಾರಿ, ಧಾರವಾಡ ಜಿಲ್ಲೆಯಲ್ಲಿ ತಲಾ 6 ಪ್ರಕರಣ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 5 ಕೇಸ್ ಗಳು ಪತ್ತೆಯಾಗಿವೆ.

ದಕ್ಷಿಣಕನ್ನಡ, ಗದಗ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ತಲಾ 3 ಪ್ರಕರಣಗಳು ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ 2, ಕೋಲಾರ, ತುಮಕೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read