ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ: ಹಸು ಯಾಕೆ ಕಡಿಯಬಾರದು ಎಂದ ಸಚಿವರಿಗೆ ಪ್ರಹ್ಲಾದ್ ಜೋಶಿ ಸವಾಲ್

ಹುಬ್ಬಳ್ಳಿ: ಹಸು ಯಾಕೆ ಕಡಿಯಬಾರದು ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ಸಿಗರು ಹಿಂದೂಗಳ ಭಾವನೆ ವಿರೋಧಿಸುತ್ತಲೇ ಬಂದಿದ್ದಾರೆ. ಗೋ ಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ. ನಮ್ಮ ಪಕ್ಷದಿಂದ ಏನು ಹೋರಾಟ ಮಾಡಬೇಕೋ ಮಾಡುತ್ತೇವೆ. ರಾಜ್ಯದ ಜನರು ಕಾಂಗ್ರೆಸ್ ನವರಿಗೆ ಉತ್ತರ ಕೊಡುತ್ತಾರೆ. ಇದು ಭಾವನಾತ್ಮಕ ಪ್ರಶ್ನೆ ಆಗುತ್ತದೆ ಎಂದು ಹೇಳಿದ್ದಾರೆ.

ಗೋವಿನ ಬಗ್ಗೆ ಕೋಟ್ಯಂತರ ಜನರಿಗೆ ಭಾವನಾತ್ಮಕ ಸಂಬಂಧವಿದೆ. ಅದನ್ನು ಕಡಿಯುತ್ತೀರಿ ಇದನ್ನೇಕೆ ಕಡಿಯಲ್ಲ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಜೋಶಿ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read