ಕ್ರಿಕೆಟ್ ಆಡುವಾಗಲೇ ದುರಂತ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಸಿದ್ದರಾಮ ನಗರದಲ್ಲಿ ನಡೆದಿದೆ.

16 ವರ್ಷದ ಶ್ರೇಯಸ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದಾಗ ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಶ್ರೇಯಸ್ ನನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಶ್ರೇಯಸ್ ಮೃತಪಟ್ಟಿದ್ದು, ಆತನ ಜೊತೆಗಿದ್ದ ಗೆಳೆಯನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಧಾರವಾಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read