ಬೆಂಗಳೂರಿನ ಆರ್.ಟಿ. ನಗರದಲ್ಲಿ ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಆರ್.ಟಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಠದಹಳ್ಳಿಯಲ್ಲಿ ರಾಜೇಶ್ ಎಂಬಾತನ ಕೊಲೆ ಮಾಡಲಾಗಿದೆ. ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡಿದ್ದು ಪಾರ್ಟಿಯ ವೇಳೆ ಗಲಾಟೆಯಾಗಿ ಕೊಲೆಮಾಡಿ ಸ್ನೇಹಿತರು ಪರಾರಿಯಾಗಿರಬಹುದೆಂದು ಹೇಳಲಾಗಿದೆ.
ಆರ್.ಟಿ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.