alex Certify ದಾರಿ ತಪ್ಪಿದ ಗೃಹಿಣಿ, ಪ್ರಿಯಕರನಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪಿದ ಗೃಹಿಣಿ, ಪ್ರಿಯಕರನಿಂದ ಘೋರ ಕೃತ್ಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿಯಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಮಗನನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ರಾಮಾಂಜಿ ಕೊಲೆ ಆರೋಪಿ ಎಂದು ಗುರುತಿಸಲಾಗಿದೆ. ಮಾರ್ಚ್ 16 ರಂದು 6 ವರ್ಷದ ಬಾಲಕ ನಾಪತ್ತೆಯಾಗಿದ್ದ. ಬಾಲಕನ ತಂದೆ, ತಾಯಿ ಹುಡುಕಾಟ ನಡೆಸಿ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡ ಸಂದರ್ಭದಲ್ಲಿ ಬಾಲಕನ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.

ಮೃತ ಮಗುವಿನ ತಾಯಿಯೊಂದಿಗೆ ರಾಮಾಂಜಿ ಅಕ್ರಮ ಸಂಬಂಧ ಹೊಂದಿದ್ದ. ಇಬ್ಬರ ನಡುವೆ ವೈಮನಸ್ಸು ಉಂಟಾದ ಕಾರಣ ಬೇರೆಯಾಗಿದ್ದರು. ಆದರೆ ಮಹಿಳೆಯನ್ನು ಮತ್ತೆ ಓಲೈಸಿಕೊಳ್ಳಲು ಮುಂದಾಗಿದ್ದ ರಾಮಾಂಜಿ ಆಕೆಯಯ 6 ವರ್ಷದ ಮಗನನ್ನು ಅಪಹರಣ ಮಾಡಿದ್ದಾನೆ. ಪೊಲೀಸರಿಗೆ ದೂರು ನೀಡಿದಾಗ ಬಾಲಕನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚೀಲದಲ್ಲಿ ತುಂಬಿ ಸಾದರ್ಲಹಳ್ಳಿ ಸಮೀಪ ಎಸೆದು ಬಂದಿದ್ದಾನೆ. ಪೊಲೀಸರ ತನಿಖೆಯಲ್ಲಿ ಈ ವಿಚಾರ ಗೊತ್ತಾಗಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...