alex Certify ಗಂಡನನ್ನು ಬೆದರಿಸಿ ವಿವಾಹಿತೆಯೊಂದಿಗೆ ಸಂಬಂಧ ಬೆಳೆಸಿದ ಪೊಲೀಸ್, ಕೊಲೆ ನಂತ್ರ ಎಸ್ಕೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡನನ್ನು ಬೆದರಿಸಿ ವಿವಾಹಿತೆಯೊಂದಿಗೆ ಸಂಬಂಧ ಬೆಳೆಸಿದ ಪೊಲೀಸ್, ಕೊಲೆ ನಂತ್ರ ಎಸ್ಕೇಪ್

ಚಿಕ್ಕಬಳ್ಳಾಪುರ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಪೊಲೀಸ್ ಜಗಳದ ವೇಳೆ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ನಗರದ ಮಾರಮ್ಮ ದೇವಾಲಯ ಹಿಂಭಾಗದ ಎಂಆರ್ ಸರ್ಕಲ್ ಸಮೀಪ ವಾಸವಾಗಿದ್ದ ಮಹಿಳೆಯೊಂದಿಗೆ ಚಿಕ್ಕಬಳ್ಳಾಪುರ ನಗರದ ಠಾಣೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಸಂಬಂಧ ಬೆಳೆಸಿದ್ದು, ಆಕೆಯ ಗಂಡನಿಗೆ ಬೆದರಿಕೆ ಹಾಕಿದ್ದ. ಮಹಿಳೆಗೆ ಹಣದ ಆಮಿಷವೊಡ್ಡಿ ದೈಹಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ.

ಭಾನುವಾರ ರಾತ್ರಿ ಮಹಿಳೆ ಮತ್ತು ಮದ್ಯದ ಅಮಲಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ನಡುವೆ ಗಲಾಟೆಯಾಗಿದ್ದು, ಈ ವೇಳೆ ವೇಲ್ ನಿಂದ ಕುತ್ತಿಗೆಗೆ ಬಿಗಿದು ಪರಾರಿಯಾಗಿದ್ದಾನೆ. ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...