alex Certify ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ವಿಧವೆ ಕೊಲೆ ರಹಸ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ವಿಧವೆ ಕೊಲೆ ರಹಸ್ಯ

ಶಿವಮೊಗ್ಗ: ಅಪಘಾತದ ಕಥೆಕಟ್ಟಿ ಮಹಿಳೆಯನ್ನು ಕೊಲೆ ಮಾಡಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ಕಮ್ಮರಡಿ ಹೊರಣೆಬೈಲು ಗ್ರಾಮದ ರವೀಶ್(32), ಆದರ್ಶ(31) ಹಾಗೂ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸಂದೀಪ(30) ಬಂಧಿತ ಆರೋಪಿಗಳು. 35 ವರ್ಷದ ಮಹಿಳೆ ಮೃತಪಟ್ಟವರು. ಪತಿ ನಿಧನದ ನಂತರ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಅನುಕಂಪದ ಆಧಾರದಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಬೆಂಗಳೂರಿನಲ್ಲಿದ್ದ ರವೀಶ್ ಗೆ ಮದುವೆಯಾಗಿದ್ದು, ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ದ. 6 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದ ಆತನ ಸಾಲಕ್ಕೆ ಮಹಿಳೆ ಜಾಮೀನು ನೀಡಿದ್ದರು. ಮದುವೆಯಾಗುವುದಾಗಿ ನಂಬಿಸಿ ದೇವಂಗಿ ಜಟ್ಟನಮಕ್ಕಿ ಬಳಿಗೆ ಮಹಿಳೆಯನ್ನು ಕರೆಸಿಕೊಂಡ ರವೀಶ್ ಸ್ನೇಹಿತರೊಂದಿಗೆ ಸೇರಿ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.

ಬಳಿಕ ಸ್ಕೂಟಿಯಲ್ಲಿ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿರುವುದಾಗಿ ಕತೆ ಕಟ್ಟಿದ್ದಾರೆ. ಫೆಬ್ರವರಿ 26 ರಂದು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡ ಪೊಲೀಸರು ಕೊಲೆ ರಹಸ್ಯ ಬಯಲಿಗೆಳೆದಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...