alex Certify ರಾತ್ರಿ ಪತಿ ಬಂದಾಗ ಪ್ರಿಯಕರನೊಂದಿಗಿದ್ದ ಪತ್ನಿ: ಆಕ್ರೋಶಗೊಂಡು ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಪತಿ ಬಂದಾಗ ಪ್ರಿಯಕರನೊಂದಿಗಿದ್ದ ಪತ್ನಿ: ಆಕ್ರೋಶಗೊಂಡು ಘೋರ ಕೃತ್ಯ

ಚಾಮರಾಜನಗರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತಿ ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ನಡೆದಿದೆ.

30 ವರ್ಷದ ಪ್ರಿಯಕರನನ್ನು 25 ವರ್ಷ ಪತಿ ಕೊಲೆ ಮಾಡಿದ್ದಾನೆ. ಆರೋಪಿ ತನ್ನ ಪತ್ನಿಯೊಂದಿಗೆ ಅದೇ ಊರಿನ ಪ್ರಿಯಕರ ಅಕ್ರಮ ಸಂಬಂಧ ಬೆಳೆಸಿದ್ದು ಈ ವಿಚಾರ ತಿಳಿದ ಪತಿ ಕೊಲೆ ಇಂತಹ ಕೃತ್ಯವೆಸಗಿದ್ದಾನೆ.

ಬುಧವಾರ ರಾತ್ರಿ ಪತ್ನಿ ಪ್ರಿಯಕರನೊಂದಿಗೆ ಇರುವುದನ್ನು ನೋಡಿದ ಪತಿ ಆಕ್ರೋಶದಿಂದ ದೊಣ್ಣೆ, ಕತ್ತಿಯಿಂದ ಥಳಿಸಿದ್ದಾನೆ. ತೀವ್ರ ಹಲ್ಲೆಗೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಿಯಕರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ. ಗುಃಡ್ಲುಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...