alex Certify ತಡರಾತ್ರಿ ದಾರಿ ತಪ್ಪಿದ ಸೊಸೆಯ ಅಕ್ರಮ ಸಂಬಂಧ ನೋಡಿದ ಅತ್ತೆ, ಉಸಿರು ನಿಲ್ಲಿಸಿದ ಪ್ರಿಯಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ದಾರಿ ತಪ್ಪಿದ ಸೊಸೆಯ ಅಕ್ರಮ ಸಂಬಂಧ ನೋಡಿದ ಅತ್ತೆ, ಉಸಿರು ನಿಲ್ಲಿಸಿದ ಪ್ರಿಯಕರ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಗ್ರಾಮದ 58 ವರ್ಷದ ಮಹಿಳೆ ಮಲಗಿದ್ದ ಸಂದರ್ಭದಲ್ಲಿ ಮೃತಪಟ್ಟಿದ್ದು, ಮನೆಯವರು ಸಹಜ ಸಾವು ಎಂದು ಭಾವಿಸಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಆದರೆ, ಮಹಿಳೆ ಕೊಲೆಯಾಗಿದ್ದಾರೆ ಎನ್ನುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯ ಮಗ ಬೆಂಗಳೂರಿನಲ್ಲಿ ಪತ್ನಿ, ಮಗುವಿನೊಂದಿಗೆ ವಾಸವಾಗಿದ್ದ. ಲಾಕ್ಡೌನ್ ಜಾರಿಯಾದ ನಂತರ ಊರಿಗೆ ಮರಳಿದ್ದ. ಈ ನಡುವೆ ದಾರಿ ತಪ್ಪಿದ ಸೊಸೆಗೆ ಅದೇ ಊರಿನ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ.

ನವೆಂಬರ್ 7 ರಂದು ರಾತ್ರಿ ಗಂಡ ಮನೆಯಲ್ಲಿಲ್ಲದ ವೇಳೆಯಲ್ಲಿ ಪ್ರಿಯಕರನನ್ನು ಕರೆಸಿಕೊಂಡಿದ್ದಾಳೆ. ತಡರಾತ್ರಿ ನಿದ್ದೆಯಲ್ಲಿದ್ದ ಮಹಿಳೆಗೆ ಎಚ್ಚರವಾಗಿದೆ. ಆಗ ಸೊಸೆಯ ಅಕ್ರಮ ಸಂಬಂಧ ಗೊತ್ತಾಗಿದೆ. ತನ್ನ ಅಕ್ರಮ ಸಂಬಂಧ ಬಯಲಾಗುವ ಭಯದಲ್ಲಿ ಪ್ರಿಯಕರ ಕತ್ತು ಹಿಸುಕಿ ಮಹಿಳೆಯನ್ನು ಕೊಲೆ ಮಾಡಿದ್ದಾನೆ.

ಇದೊಂದು ಸಹಜ ಸಾವು ಎನ್ನುವಂತೆ ಬಿಂಬಿಸಲಾಗಿದೆ. ಅಂತ್ಯಕ್ರಿಯೆಯನ್ನೂ ನೆರವೇರಿಸಲಾಗಿದೆ. ತಾಯಿಯ ಸಾವಿನ ಬಗ್ಗೆ ಅನುಮಾನಗೊಂಡ ಪುತ್ರ ನ್ಯಾಮತಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪತ್ನಿಯ ಅಕ್ರಮ ಸಂಬಂಧದ ಕಾರಣದಿಂದ ತಾಯಿ ಕೊಲೆಯಾಗಿರುವುದು ಗೊತ್ತಾಗಿದೆ. ತನಿಖೆ ಕೈಗೊಂಡ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...