alex Certify ಭೀಕರ ಹತ್ಯೆ ಕಂಡು ಬೆಚ್ಚಿ ಬಿದ್ದ ಜನ: ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಹತ್ಯೆ ಕಂಡು ಬೆಚ್ಚಿ ಬಿದ್ದ ಜನ: ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಳುಂಡಗಿ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಕಿರಿಯ ಸಹೋದರ ಹನುಮಂತನ ಕೂಡಲಗಿ(40) ಮೃತಪಟ್ಟವರು ಎಂದು ಹೇಳಲಾಗಿದೆ. ಕೂಡಲಗಿ ಗ್ರಾಮದಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆಯಲ್ಲಿ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹನುಮಂತ ಕೂಡಲೇ ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...