ದನಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ

ರಾಯಚೂರು: ದನಗಳ ಮೈ ತೊಳೆಯಲೆಂದು ಕೆರೆಗೆ ಹೋಗಿದ್ದ ರೈತರಿಬ್ಬರ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸರ್ಜಾಪುರದಲ್ಲಿ ನಡೆದಿದೆ.

ಮಹಾನಂದ ಮೊಸಳೆ ದಾಳಿಯಿಂದ ಗಾಯಗೊಂಡಿರುವ ರೈತ. ಎತ್ತುಗಳ ಮೈ ತೊಳೆಯಲೆಂದು ಮಹಾನಂದ ಕೆರೆಗೆ ಹೋಗಿದ್ದರು. ಈ ವೇಳೆ ಏಕಾಎಕಿ ಮೊಸಳೆ ದಾಳಿ ನಡೆಸಿದೆ. ರೈತನ ಬಲಗಾಲಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ರೈತನನ್ನು ರಾಯಚೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಗ್ರಾಮಸ್ಥರ ಸಹಾಯದಿಂದ ಮೊಸಳೆ ಸೆರೆ ಹಿಡಿದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read