ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ಅವಧಿಯ ಪ್ರಸ್ತಾವಗಳ ಸಮಗ್ರ ಮಾಹಿತಿ ನೀಡಲು ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ ಅಧಿಕಾರಿ ನೌಕರರ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಅನುಮತಿ ಕೋರಿ ಲೋಕಾಯುಕ್ತದಿಂದ ಸಲ್ಲಿಕೆಯಾದ ಪ್ರಸ್ತಾವಗಳ ಸಮಗ್ರ ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನಿರ್ದೇಶನ ನೀಡಿದ್ದಾರೆ.

2023ರ ಮೇ 20ರಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಅಂದಿನಿಂದ ಇದುವರೆಗಿನ ಅವಧಿಯಲ್ಲಿ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಲೋಕಾಯುಕ್ತರು ಕೋರಿರುವ ಮಾಹಿತಿಯನ್ನು ಮಾತ್ರ ಒದಗಿಸುವಂತೆ ರಾಜ್ಯಪಾಲರು ಕೇಳಿದ್ದಾರೆ.

ರಾಜ್ಯಪಾಲರ ನಿರ್ದೇಶನವನ್ನು ತುರ್ತು ಎಂದು ಪರಿಗಣಿಸಿ, ಅವರ ಪತ್ರದೊಂದಿಗೆ ನೀಡಿದ ನಮೂನೆಯಲ್ಲಿ ಎಲ್ಲಾ ಮಾಹಿತಿ ಒದಗಿಸುವಂತೆ ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read