BREAKING : ‘ಮಿಚಾಂಗ್’ ಚಂಡಮಾರುತ ಎಫೆಕ್ಟ್ : ಕರ್ನಾಟಕದಿಂದ ತಮಿಳುನಾಡಿಗೆ ತೆರಳಬೇಕಿದ್ದ 10ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡು, ಚೆನ್ನೈನಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಜೋರಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಪರ್ಯಾಯ ದ್ವೀಪವನ್ನು ಅಪ್ಪಳಿಸುವ ತೀವ್ರ ಚಂಡಮಾರುತ ಮಿಚಾಂಗ್ ಮಂಗಳವಾರದಿಂದ ರಾಜ್ಯದ ಹವಾಮಾನದ ಮೇಲೆ ಭಾಗಶಃ ಪರಿಣಾಮ ಬೀರುವ ಸಾಧ್ಯತೆಯಿದೆ. ಪರಿಣಾಮ ಭಾರತೀಯ ರೈಲ್ವೆ ಸುಮಾರು 10 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ.

ಕರ್ನಾಟಕ ರಾಜ್ಯದಿಂದ ತೆರಳಬೇಕಿದ್ದ ಹತ್ತಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ . ಚೆನ್ನೈನಲ್ಲೂ ಭಾರಿ ಮಳೆಯಾಗುತ್ತಿದ್ದು ಚೆನ್ನೈ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ.

ತಮಿಳುನಾಡಿನ ಬಹುತೇಕ ರೈಲ್ವೆ ನಿಲ್ದಾಣಗಳು ನೀರಿನಿಂದ ತುಂಬಿದ್ದು, ಕೆಲವೆಡೆ ಸಂಚಾರಕ್ಕೆ ಅಡ್ಡಿಯಾಗಿದೆ. ಕರ್ನಾಟಕ ರಾಜ್ಯದಿಂದ ತೆರಳಬೇಕಿದ್ದ ಹತ್ತಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದ್ದು, ಇಂದು ಯಾವ ರೈಲು ಕೂಡ ತಮಿಳುನಾಡಿಗೆ ಹೋಗುವುದಿಲ್ಲ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read