ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯವರು ಧ್ವೇಷ ಭಾಷಣ ಮಾಡದೇ ಇದ್ದರೇ ಎಲ್ಲವೂ ಸರಿ ಹೋಗುತ್ತೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಧ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಗರು ಪಿತಾಮಹರು. ಜಾತಿ ಜಾತಿಗೆ, ಧರ್ಮ ಧರ್ಮಗಳಿಗೆ ವೈಯಕ್ತಿಕ ನಿಂದನೆ ಮಾಡುವವರಲ್ಲಿ ಅವರು ಮೊದಲಿಗರು. ಸಂವಿಧಾನದ ಪ್ರಕಾರ ಬಿಜೆಪಿಯವರು ಮೊದಲು ನಡೆದುಕೊಳ್ಳಲಿ. ಸಂವಿಧಾನ ರಕ್ಷಣೆಗೆ ವಿಧೇಯಕ ಮಂಡನೆ ಮಾಡುತ್ತಿದ್ದೇವೆ ಎಂದರು.
ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಅಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುವಂತೆ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮನವಿ ಮಾಡಿದ್ದಾರೆ. ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.
