ಮೈಸೂರು ದಸರಾ ಮಹೋತ್ಸವ: ದೀಪಾಲಂಕಾರ 10-12 ದಿನಗಳ ಕಾಲ ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ದಸರಾ ಮಹೋತ್ಸವ, ಜಂಬೂಸವಾರಿ ಹಿನ್ನೆಲೆಯಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದಕ್ಕಿಂತ ಈ ಬಾರಿ ಅತ್ಯುತ್ತಮವಾಗಿ ದೀಪಾಲಂಕಾರ ಮಾಡಲಾಗಿದೆ. ಅಲ್ಲದೆ ಒಂದೂವರೆ ಸಾವಿರ ಡ್ರೋನ್ ಗಳ ಶೋ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕೃತಿಕ ನಾಡಿನಲ್ಲಿ ನಮ್ಮ ಜನ ನಮ್ಮ ಸಂಸ್ಕೃತಿಯನ್ನು ಕಣ್ತುಂಬಿಕೊಂಡು ಆನಂದಿಸಲಿ ಎಂದು ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಳೆದ ಹತ್ತು ದಿನಗಳಲ್ಲಿ ಇಳಯರಾಜ, ಎ.ಆರ್ ರೆಹಮಾನ್ ಅವರ ಕಾರ್ಯಕ್ರಮಗಳಿಗೆ ಎರಡೂವರೆ ಲಕ್ಷ ಜನ ಸೇರಿದ್ದರು. ದಸರಾದ ಈ ಶುಭ ಸಂದರ್ಭದಲ್ಲಿ ನಾಡಿನ ಜನ ನೆಮ್ಮದಿ, ಶಾಂತಿಯಿಂದ ಬದುಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಎಲ್ಲರೂ ಸೇರಿ ದಸರಾ ಆಚರಣೆ ಮಾಡೋಣ. ಮೈಸೂರಿನಲ್ಲಿ ದೀಪಾಲಂಕಾರ ಇನ್ನೂ 10-12 ದಿನಗಳವರೆಗೆ ಇರಲಿದೆ ಎಂದರು.

ಇದೇ ವೇಳೆ ನಾಡಿನ ವಿವಿಧ ಭಾಗಗಳಲ್ಲೂ ದಸರಾ ಕಾರ್ಯಕ್ರಮವನ್ನು ಬಹಳ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲಿ ಮೈಸೂರಿಗಿಂತಲೂ ಹೆಚ್ಚಿನ ಹಣ ವ್ಯಯ ಮಾಡಿ ಸ್ತಬ್ಧಚಿತ್ರಗಳನ್ನು ಮಾಡಿದ್ದಾರೆ. ಇದನ್ನು ನೋಡಿ ನನಗೆ ಅಚ್ಚರಿಯಾಯಿತು ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read