BIG NEWS: 2 ವರ್ಷಕ್ಕೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸೀಮಿತ ವಿಚಾರ; ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಆದೇಶ ಹೊರಡಿಸಿದೆ. 2 ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಡಿಸಿಸಿಎಂ ಡಿ.ಕೆ.ಶಿವಕುಮಾರ್, ಬೇರೆಯವರಿಗೂ ಅಧಿಕಾರ ಹಂಚಬೇಕು. ಹಾಗಾಗಿ 2 ವರ್ಷಕ್ಕೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸೀಮಿತ ಮಾಡಿದ್ದೇವೆ ಎಂದರು.

ಶೀಘ್ರವೇ ಲೋಕಸಭಾ ಚುನಾವಣೆ ಬರಲಿದೆ, ನೀತಿ ಸಂಹಿತೆ ಜಾರಿಯಾಗಲಿದೆ. 2 ವರ್ಷದ ಬಳಿಕ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ಹೈಕಮಾಂಡ್ ಆದೇಶವನ್ನು ನಾವು ಪಾಲಿಸುತ್ತೇವೆ. ಇದರಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ಟ್ಯಾಂಡ್ ಏನೂ ಇಲ್ಲ. ಪಕ್ಷಕ್ಕೆ ಅನೇಕ ಜನರು ದುಡಿದಿದ್ದಾರೆ. ಅವರಿಗೂ ಅಧಿಕಾರ ಸಿಗಬೇಕು ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read