BIG NEWS: ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ? ರಾಯರೆಡ್ಡಿ ಪತ್ರಕ್ಕೆ ಡಿಸಿಎಂ ಸಮರ್ಥನೆ

ಬೆಂಗಳೂರು: ಶಾಸಕ ಬಸವರಾಜ್ ರಾಯರೆಡ್ಡಿ ಮತ್ತೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರದ್ದು ಸಮಸ್ಯೆಗಳು, ಬೇಡಿಕೆಗಳಿರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳಿಕೊಳ್ಳುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಶಾಸಕರು ತಮ್ಮ ನೋವು ಸಮಸ್ಯೆಗಳನ್ನು ಹೇಳಿಕೊಳ್ಳಬಾರದಾ? ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ? ಎಂದುರು.

ಕಾಂಗ್ರೆಸ್ ಪಕ್ಷದ ಒಳಗೆ ಶಿಸ್ತಿದೆ ಯಾವುದೇ ಸಮಸ್ಯೆಯೂ ಇಲ್ಲ. ಯಾವ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ಗರಂ ಆದರು.

ಇದೇ ವೇಳೆ ಚಂದ್ರಯಾನದ ಅಶಸ್ಸಿನ ಬಳಿಕ ಸುರ್ಯಯಾನ ಮಾಡುತ್ತಿರುವ ಇಸ್ರೋ ಸಂಸ್ಥೆಗೆ ಅಭಿನಂದನೆಗಳು. ಹಲವು ಪ್ರಯೋಗ, ಪ್ರಯತ್ನಗಳ ನಂತರ ಸೂರ್ಯ ಯಾನ ಮಾಡುತ್ತಿದ್ದಾರೆ. ಅವರ ಮತ್ತೊಂದು ಸಾಹಸ ಯಶ ಕಾಣಲಿ ಎಂದು ಹಾರೈಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read