BIG NEWS: ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಕರೆ; ಡಿಸಿಎಂ ಹೇಳಿದ್ದೇನು?

ಬೆಂಗಳೂರು: ಸೆ.11ರಂದು ವಿವಿಧ ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಖಾಸಗಿ ವಾಹನಗಳಲ್ಲಿ ಯಾರೂ ಹೋಗದ ಸ್ಥಿತಿ ಇದೆ. ಈ ಬಗ್ಗೆ ಏನಾದರೂ ಉಪಾಯ ಮಾಡಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಖಾಸಗಿ ಸಾರಿಗೆಯಲ್ಲಿ ಯಾರೂ ಹೋಗುತ್ತಿಲ್ಲ. ಕೆಲ ಜಿಲ್ಲೆಗಲಲ್ಲಿ ಸರ್ಕಾರಿ ಬಸ್ ಗಳೇ ಇಲ್ಲ. ಖಾಸಗಿ ಬಸ್ ಗಳೇ ಇವೆ. ಇನ್ನು ಕೆಲವೆಡೆಗಳಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚು ಬಳಸುತ್ತಾರೆ. ಇಂತಹ ಕಡೆಗಳಲ್ಲಿ ಏನಾದರೂ ಉಪಾಯ ಮಾಡಬೇಕಾಗುತ್ತದೆ ಎಂದರು.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತನಾಡುತ್ತೇನೆ. ಸಾರಿಗೆ ಒಕ್ಕೂಟಗಳ ಸಮಸ್ಯೆಗೆ ಶೀಘ್ರವೇ ಪರಿಹಾರ ಕಂಡು ಹಿಡಿಯುವುದಾಗಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read