BIG NEWS: ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಷನ್ ಮಾಡಬೇಕು; ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ವ್ಯಂಗ್ಯವಾಡಿದ ಡಿಸಿಎಂ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಷನ್ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಬಿಜೆಪಿ ಮತ್ತು ಜೆಡಿಎಸ್ ನಾಯಕ ವಾಗ್ದಾಳಿ ವಿಚಾರವಾಗಿ ಮಾತನಾಡುತ್ತಾ, ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಹಾಗಾಗಿ ವೈದ್ಯರೇ ಸರ್ಜರಿ ಮಾಡಬೇಕು ಎಂದರು.

ಜಗದೀಶ್ ಶೆಟ್ಟರ್‌ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read