ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ನದಿಗಳು, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ನೇತ್ರಾವತಿ ನದಿ ಮೈದುಂಬಿ ಹರಿಯ್ಯುತ್ತಿದ್ದು, ಯಾತ್ರಿಕರು ನದಿಗೆ ಇಳಿಯದಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಬರುವ ಭಕ್ತರು, ಯಾತ್ರಾರ್ಥಿಗಳು ಸ್ನಾನಕ್ಕೆಂದು ನದಿಗೆ ಇಳಿಯದಂತೆ ದೇವಸ್ಥಾನ ಆಡಳಿತ ಮಂಡಳಿ, ಸ್ಥಳೀಯ ಆಡಳಿತ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲೆಯಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.