BREAKING NEWS: ಮಳೆ ಅವಾಂತರಕ್ಕೆ ದಕ್ಷಿಣ ಕನ್ನಡದಲ್ಲಿ 5ನೇ ಬಲಿ: ವಿದ್ಯುತ್ ಪ್ರವಹಿಸಿ ಮೆಸ್ಕಾಂ ಸಿಬ್ಬಂದಿ ದುರ್ಮರಣ

ಮಂಗಳೂರು: ವರುಣಾರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಲು ಸಾಲು ಅನಾಹುತಗಳು ಸಂಭವಿಸಿವೆ. ಗುಡ್ಡ ಕುಸಿದು ಮೂವರು ಸಾವು, ಮೀನುಗಾರಿಕಾ ಬೋಟ್ ಪಲ್ಟಿಯಾಗಿ ಇಬ್ಬರು ಕಣ್ಮರೆ ಘಟನೆ ಬೆನ್ನಲ್ಲೇ ಇದೀಗ ಕರೆಂಟ್ ಶಾಕ್ ಹೊಡೆದು ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಳೆಯಿಂದ ಕೆಟ್ಟುಹೋಗಿದ್ದ ಟಿಸಿ ದುರಸ್ತಿ ವೇಳೆ ಹೈಟೆನ್ಶನ್ ವಿದ್ಯುತ್ ವೈರ್ ನಿಂದ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿನ್ಮಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ವಿಜೇಶ್ ಜೈನ್ (27) ಮೃತ ಸಿಬ್ಬಂದಿ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read