ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದೆ. ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರ, ಅನಾಹುತಗಳು ಸಂಭವಿಸಿವೆ. ಈ ನಡುವೆ ಭಾರಿ ಮಳೆಗೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕವೇ ಸಂಪೂರ್ಣ ಕಡಿತಗೊಂಡಿದೆ.
ರಸ್ತೆಗಳಲ್ಲಿ ಪ್ರವಾಹದಂತೆ ನೀರು ಹರಿಯುತ್ತಿದ್ದು, ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಭಾಗದ ಪ್ರದೇಶ ಸಂಪೂರ್ಣ ನದಿಯಂತಾಗಿದ್ದು, 10ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಮನೆಯಲ್ಲಿದ್ದ ಕುಟುಂಬಗಳು ರಕ್ಷಣೆಗಾಗಿ ಮೊರೆಯಿಟ್ಟಿವೆ.
ಎನ್ ಡಿಆರ್ ಎಫ್ ತಂಡ ರಕ್ಷಣೆಗೆ ಧಾವಿಸಿದ್ದು, ಮನೆಯಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮುಂದುವರೆದಿದೆ.