BREAKING: ಮನೆ ಗೋಡೆ ಕುಸಿದುಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಗಳೂರು:
ಧಾರಾಕಾರವಾಗಿ ಸುರುದ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ಎಂಬಲ್ಲಿ ಈ ಘಟನೆ ನಡೆದಿದೆ. ಅಬೂಬಕ್ಕರ್ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ.

ಯಾಸಿರ್, ಮರಿಯಮ್ಮ, ರಿಯಾನ ಹಾಗೂ ರಿಫಾನ ಮೃತ ದುರ್ದೈವಿಗಳು. ಯಾಸಿರ್ ಮನೆ ಮೇಲೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮೂವರ ಮೃತ ದೇಹಗಳನ್ನು ಹೊರತೆಗೆಯಲಾಗಿದೆ.

ಬಾಲಕಿ ರಿಫಾನಾ ಮೃತ ದೇಹ ಪತ್ತೆಯಾಗಿಲ್ಲ. ಅವಶೇಷಗಳಡಿ ಸಿಲುಕಿದ್ದು, ಕಾರ್ಯಾಚರಣೆ ಮುಂದುವರೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read