BREAKING: ಬಳ್ಳಾರಿ ಜೈಲಿಂದ ಬೆಂಗಳೂರು ನಿವಾಸಕ್ಕೆ ಬಂದ ನಟ ದರ್ಶನ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಹೊಸಕೆರೆಹಳ್ಳಿಯಲ್ಲಿರುವ ನಿವಾಸಕ್ಕೆ ದರ್ಶನ್ ಆಗಮಿಸಿದ್ದು, ಅಪಾರ ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಡಿ ಬಾಸ್ ಎಂದು ಘೋಷಣೆ ಕೂಗಿ ನಮಗೆ ದೀಪಾವಳಿ ಹಬ್ಬದ ಸಂಭ್ರಮ ಇಮ್ಮಡಿಸಿದೆ ಎಂದು ಹೇಳಿದ್ದಾರೆ.

ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್ ಅವರೊಂದಿಗೆ ಬಳ್ಳಾರಿ ಜೈಲ್ ನಿಂದ ನೇರವಾಗಿ ದರ್ಶನ್ ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮಿ ನಿವಾಸಕ್ಕೆ ಆಗಮಿಸಿದ್ದಾರೆ. 131 ದಿನಗಳ ನಂತರ ಅವರು ಮನೆಗೆ ಆಗಮಿಸಿದ್ದಾರೆ. ಐದು ತಿಂಗಳ ಜೈಲುವಾಸಕ್ಕೆ ತಾತ್ಕಾಲಿಕ ಬಿಡುವು ಸಿಕ್ಕಿದೆ. ವೈದ್ಯಕೀಯ ಚಿಕಿತ್ಸೆಗಾಗಿ ದರ್ಶನ್ ಗೆ ಜಾಮೀನು ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read