BREAKING: ರೇಣುಕಾಸ್ವಾಮಿಗೆ ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ಬಹಿರಂಗ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡುವ ಮೊದಲು ದರ್ಶನ್ ಗ್ಯಾಂಗ್ ಕ್ರೌರ್ಯ ಮೆರೆದಿರುವ ಫೋಟೋ ಬಹಿರಂಗವಾಗಿದೆ.

ರೇಣುಕಾ ಸ್ವಾಮಿ ಕಣ್ಣೀರಿಟ್ಟು ಬೇಡಿಕೊಳ್ಳುತ್ತಿರುವ ಮತ್ತು ನೆಲದ ಮೇಲೆ ಅರೆ ಜೀವವಾಗಿ ಬಿದ್ದಿರುವ ಫೋಟೋಗಳು ಪೊಲೀಸರ ಕೈ ಸೇರಿವೆ. ಈ ಫೋಟೋಗಳನ್ನು ಆರೋಪಿ ವಿನಯ್ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ. ನಂತರ ಅವುಗಳನ್ನು ಡಿಲೀಟ್ ಮಾಡಿದ್ದ. ಆದರೆ, ಎಫ್.ಎಸ್.ಎಲ್. ಟೀಮ್ ಡಿಲಿ ಆಗಿದ್ದ ಫೋಟೋಗಳನ್ನು ರಿಟ್ರಿವ್ ಮಾಡಿದೆ. ವಿನಯ್ ಮೊಬೈಲ್ ನಲ್ಲಿದ್ದ 10ಕ್ಕೂ ಹೆಚ್ಚು ಫೋಟೋಗಳನ್ನು ರಿಟ್ರಿವ್ ಮಾಡಲಾಗಿದೆ.

ಪಟ್ಟಣಗೆರೆ ಶೆಡ್ ನಲ್ಲಿ ಎರಡು ಲಾರಿಗಳ ನಡುವೆ ರೇಣುಕಾಸ್ವಾಮಿ ಅರೆ ಜೀವವಾಗಿ ಬಿದ್ದಿರುವ ಫೋಟೋ ಹಾಗೂ ಕಣ್ಣೀರಿಡುತ್ತಾ ಅಂಗಲಾಚಿ ಬೇಡುತ್ತಿರುವ ಫೋಟೋಗಳು ರಿವಿಲ್ ಆಗಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read