ನಟ ದರ್ಶನ್ ಆಸ್ಪತ್ರೆಗೆ ದಾಖಲು: ನೆಚ್ಚಿನ ನಟನ ನೋಡಲು ಅಭಿಮಾನಿಗಳ ದಂಡು

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ಮೆಡಿಕಲ್ ಕಾಲೇಜಿಗೆ ಮಂಗಳವಾರ ರಾತ್ರಿ ಕರೆದೊಯ್ದು ಸಿಟಿ ಸ್ಕ್ಯಾನ್, ಎಂಆರ್ಐ ಮಾಡಲಾಗಿದೆ.

ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಸಾ ರೆಡ್ಡಿ ನೇತೃತ್ವದ ವೈದ್ಯರ ತಂಡ ಜೈಲಿಗೆ ತೆರಳಿ ದರ್ಶನ್ ಅವರ ಆರೋಗ್ಯ ಪರೀಕ್ಷಿಸಿ ನಂತರ ವರದಿಯನ್ನು ಜೈಲಾಧಿಕಾರಿಗಳಿಗೆ ನೀಡಿದೆ.

ನಂತರ ಪೊಲೀಸ್ ಬಂದೋಬಸ್ತ್ ನಲ್ಲಿ ದರ್ಶನ್ ಅವರನ್ನು ಬಿಮ್ಸ್ ಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ.. ದರ್ಶನ್ ಇದ್ದ ವಾರ್ಡ್ ಸುತ್ತ ಭದ್ರತೆ ಹೆಚ್ಚಿಸಲಾಗಿತ್ತು. ನಟನನ್ನು ನೋಡಲು ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಸೇರಿದ್ದರಿಂದ ಪೊಲೀಸರು ಬಿಗಿ ಬಂದೋ ಬಸ್ತ್ ಕೈಗೊಂಡಿದ್ದರು.

ಸ್ಕ್ಯಾನ್ ಮಾಡಿದ ಬಳಿಕ ಅವರನ್ನು ವಾಪಸ್ ಜೈಲಿಗೆ ಸ್ಥಳಾಂತರಿಸಲಾಗಿದ್ದು, ಅಭಿಮಾನಿಗಳು ಆಂಬುಲೆನ್ಸ್ ಹಿಂಬಾಲಿಸುತ್ತಾ ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read