ಭರ್ಜರಿ ಯಶಸ್ಸು ಕಂಡ ‘ಕಾಟೇರ’ ಚಿತ್ರ ತಂಡಕ್ಕೆ ಕಾರ್ ಗಿಫ್ಟ್

ಬೆಂಗಳೂರು: ನಟ ದರ್ಶನ್ ಅಭಿನಯದ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಯಶಸ್ವಿಯಾಗಿ 100 ದಿನ ಪೂರೈಸಿದೆ. ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ಕಾಟೇರ’ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಚಿತ್ರತಂಡದ ಮೂವರಿಗೆ ಕಾರ್ ಗಳನ್ನು ಉಡುಗೊರೆಯಾಗಿ ನೀಡಲಾಗಿದೆ.

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ನಟ ದರ್ಶನ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕತೆ ಬರೆದ ಜಡೇಶ್ ಕುಮಾರ್ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಮತ್ತು ಪಾತ್ರ ನಿರ್ವಹಿಸಿದ ಸೂರಜ್ ಅವರಿಗೆ ಕಾರ್ ಗಳನ್ನು ಉಡುಗೊರೆಯಾಗಿ ನೀಡಲಾಗಿದೆ.

‘ಕಾಟೇರ’ ಚಿತ್ರದಲ್ಲಿ ಸೂರಜ್ ಉತ್ತಮ ಪಾತ್ರ ನಿರ್ವಹಿಸಿದ್ದರು. ಚಿತ್ರೀಕರಣ ಮುಗಿದ ಕೂಡಲೇ ಅವರಿಗೆ ಅಪಘಾತವಾಗಿತ್ತು. ಮಾಸ್ತಿ, ಜಡೇಶ್ ಮತ್ತು ಸೂರಜ್ ಅವರನ್ನು ಗಮನದಲ್ಲಿಟ್ಟುಕೊಂಡು ನಾನು, ದರ್ಶನ್ ಮತ್ತು ತರುಣ್ ಸುಧೀರ್ ಕಾರ್ ನೀಡುವ ನಿರ್ಧಾರ ಕೈಗೊಂಡೆವು ರಾಕ್ ಲೈನ್ ವೆಂಕಟೇಶ್ ಹೇಳಿದ್ದಾರೆ.

ಅವರು ಶ್ರದ್ಧೆಯಿಂದ ಮಾಡಿದ ಕೆಲಸ ಜನರಿಗೆ ಖುಷಿ ಕೊಟ್ಟಿದೆ. ಅದಕ್ಕಾಗಿ ಅವರ ಅವರಿಗಾಗಿ ಚಿಕ್ಕ ಕಾಣಿಕೆ ಅರ್ಪಿಸಿದ್ದೇವೆ. ಉಡುಗೊರೆಗೆ ಬೆಲೆ ಕಟ್ಟಲಾಗದು ಎಂದು ದರ್ಶನ್ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read